Annabhagya Scheme: ಅನ್ನಭಾಗ್ಯ ಯೋಜನೆಯ ಹಣ ಜಮಾ.! ಹಣ ಜಮಾ ಆಗಿಲ್ಲ ಅಂದರೆ ಈ ಕೆಲಸ ಮಾಡಿ.!

Annabhagya Scheme: ಅನ್ನಭಾಗ್ಯ ಯೋಜನೆಯ ಹಣ ಜಮಾ.! ಹಣ ಜಮಾ ಆಗಿಲ್ಲ ಅಂದರೆ ಈ ಕೆಲಸ ಮಾಡಿ.!

ನಮಸ್ಕಾರ ಎಲ್ಲರಿಗೂ, ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ ಆಗಿರುವುದರ ಬಗ್ಗೆ ಈ ಲೇಖನದಲ್ಲಿ ಮಾಹಿತಿಯನ್ನು ತಿಳಿಸಲಾಗಿರುತ್ತದೆ ಮತ್ತು ಅನ್ನಭಾಗ್ಯ ಯೋಜನೆಯ ಹಣ ಯಾರ ಖಾತೆಗೆ ಜಮಾ ಆಗಿಲ್ಲ ಅಂತವರು ಯಾವ ಕೆಲಸವನ್ನು ಮಾಡಬೇಕು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿರುತ್ತದೆ ಸಂಪೂರ್ಣವಾದ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ. 

ಅನ್ನಭಾಗ್ಯ ಯೋಜನೆ (Annabhagya Scheme)

ಅನ್ನಭಾಗ್ಯ ಯೋಜನೆಯ ಕಾಂಗ್ರೆಸ್ ಸರ್ಕಾರವು ನೀಡಿರುವಂತಹ ಐದು ಗ್ಯಾರಂಟಿ ಯೋಜನೆಗಲ್ಲಿ ಒಂದಾಗಿದ್ದು ಈ ಯೋಜನೆಯ ಮೂಲಕ ಬಿಪಿಎಲ್ ರೇಷನ್ ಕಾರ್ಡ್ ಹಾಗೂ ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವಂತಹ ಕುಟುಂಬಗಳಿಗೆ 10 ಕೆಜಿ ಅಕ್ಕಿಯನ್ನು ನೀಡುವುದಾಗಿ ಕಾಂಗ್ರೆಸ್ ಪಕ್ಷವು ಬರವಸೆಯನ್ನು ನೀಡಿತ್ತು.

Annabhagya Scheme
Annabhagya Scheme

Also read: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್.! ಚಿನ್ನದ ಬೆಲೆಯಲ್ಲಿ ಇಳಿಕೆ.!

ಕಾಂಗ್ರೆಸ್ ಪಕ್ಷವು ಚುನಾವಣೆಗಿಂತ ಮುಂಚೆ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು ಆ ಗ್ಯಾರಂಟಿಗಳಲ್ಲಿ ಒಂದಾಗಿರುವಂತಹ ಅನ್ನ ಭಾಗ್ಯ ಯೋಜನೆಯು ಬಿಪಿಎಲ್ ರೇಷನ್ ಕಾರ್ಡ್ ಹಾಗೂ ಅಂತ್ಯೋದಯ ಪಡಿತರ ಚೀಟಿಯನ್ನು ಹೊಂದಿರುವಂತಹ ಕುಟುಂಬಗಳಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿಯನ್ನು ನೀಡಅಂತ್ಯೋದಯತಿಳಿಸಿತ್ತು. ಅಕ್ಕಿಯ ಅಭಾವದಿಂದ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿ ಮಾತ್ರ ಜನರಿಗೆ ಸಿಗುತ್ತಿದೆ ಉಳಿದ ಐದು ಕೆಜಿ ಅಕ್ಕಿಯನ್ನು ಹಣದ ರೂಪದಲ್ಲಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. 

ಅಕ್ಕಿಯ ಅಭಾವದಿಂದ ಕಾಂಗ್ರೆಸ್ ಸರ್ಕಾರವು ಒಂದು ಕೆಜಿ ಹಕ್ಕಿಗೆ 34 ರೂಪಾಯಿಯಂತೆ 5 ಕೆಜಿ ಅಕ್ಕಿಗೆ 170 ಹಣವನ್ನು ಪಡಿತರ ಚೀಟಿ ಹೊಂದಿರುವಂತಹ ಮುಖ್ಯಸ್ಥರ ಖಾತೆಗೆ ಹಣವನ್ನು ವರ್ಗಾವಣೆ ಮಾಡುತ್ತಾ ಬಂದಿದೆ. ಇಲ್ಲಿಯವರೆಗೂ ಡಿಸೆಂಬರ್ ಮತ್ತು ನವಂಬರ್ ತಿಂಗಳವರೆಗೆ ಜನರು ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣವನ್ನು ಪಡೆದುಕೊಂಡಿದ್ದಾರೆ. 

ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ (Annabhagya Scheme)

ಜನವರಿ 27 ನೇ ತಾರೀಕು ಅನ್ನ ಭಾಗ್ಯ ಯೋಜನೆಯ ಹಣವು ಸಾಕಷ್ಟು ಫಲಾನುಭವಿಗಳ ಖಾತೆಗೆ ಬಿಡುಗಡೆಯಾಗಿದ್ದು ಇದಕ್ಕೆ ಸಂಬಂಧಿಸಿದ ಹಾಗೆ ಕೆಳಗಡೆ ಮಾಹಿತಿಯನ್ನು ನೀಡಲಾಗಿದೆ. ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿರುವುದು ಈ ಕೆಳಗಡೆ ನೀವು ಕಾಣಬಹುದಾಗಿದೆ. 

ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗುತ್ತಿರುವುದು ಪ್ರಾರಂಭವಾಗಿದ್ದು ಇನ್ನೂ ಕೂಡ ಖಾತೆಗೆ ಹಣ ಜಮಾ ಆಗಿಲ್ಲ ಅಂದರೆ ಯಾವುದೇ ಭಯಪಡುವ ಅವಶ್ಯಕತೆ ಇಲ್ಲ ಪ್ರತಿದಿನವೂ ಕೂಡ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತದೆ ಇನ್ನು ಐದರಿಂದ ಹತ್ತು ದಿನಗಳಲ್ಲಿ ಎಲ್ಲರ ಖಾತೆಗೆ ಹಣ ಬಂದು ತಲುಪಲಿದೆ ಎಂಬ ಮಾಹಿತಿ ತಿಳಿದು ಬಂದಿದೆ. 

ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು.? (Annabhagya Scheme)

ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗಿಲ್ಲ ಅಂದರೆ ರೇಷನ್ ಕಾರ್ಡ್ ನಲ್ಲಿರುವಂತಹ ಕುಟುಂಬದ ಸದಸ್ಯರ ಈ ಕೆವೈಸಿ ಕಡ್ಡಾಯವಾಗಿ ಮಾಡಿಸಬೇಕು. ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ರೇಷನ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿಸಬೇಕು ಅಂದಾಗ ಅನ್ನ ಭಾಗ್ಯ ಯೋಜನೆಯ ಕುಟುಂಬದ ಮುಖ್ಯಸ್ಥರ ಖಾತೆಗೆ ಹಣ ಜಮಾ ಆಗುತ್ತದೆ. 

Also read: ಅನ್ನಭಾಗ್ಯ ಅಕ್ಕಿ ಹಣ ಬಿಡುಗಡೆ.! ನಿಮಗೆ ಹಣ ಬಂದಿಲ್ಲ ಅಂದರೆ ಕೂಡಲೇ ಈ ಕೆಲಸ ಮಾಡಿ

ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಮಾಡಿಸಬೇಕು ಮತ್ತು ಕೆವೈಸಿ ಸಂಬಂಧಿಸಿದ ಕೆಲಸಗಳನ್ನು ಕಡ್ಡಾಯವಾಗಿ ಮಾಡಿಸಿರಬೇಕು ಅಂದಾಗ ಖಂಡಿತವಾಗಿಯೂ ಕೂಡ ಅನ್ನಭಾಗ್ಯ ಯೋಜನೆಯ ಹಣ ಜಮಾ ಆಗುತ್ತದೆ. ಆದರೂ ಕೂಡ ಹಣ ಜಮಾ ಆಗಿಲ್ಲವೆಂದರೆ ನಿಮ್ಮ ಹತ್ತಿರವಿರುವ ಆಹಾರ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಜಮಾ ಆಗುತ್ತಿಲ್ಲ ಎಂಬ ಮಾಹಿತಿಯನ್ನು ಪಡೆದುಕೊಳ್ಳಿ.

Leave a Comment